Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:1
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ


ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು