Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:8
17 ತಿಳಿವುಗಳ ಹೋಲಿಕೆ  

ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.


ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು