Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:2
11 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


“ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.


ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು