Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:4
16 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.


ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.


“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.


ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು