Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:5
19 ತಿಳಿವುಗಳ ಹೋಲಿಕೆ  

ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?


“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು