Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:10
24 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.


ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು