Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:14
27 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು