Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:16
23 ತಿಳಿವುಗಳ ಹೋಲಿಕೆ  

ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.


ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.


ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.


ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು