Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಭಟರಲ್ಲಿ ನೂರು ಮಂದಿ ಉಳಿಯುವರು; ಒಂದು ಊರಿನಿಂದ ಹೊರಟ ನೂರು ದಂಡಾಳುಗಳಲ್ಲಿ ಇಸ್ರಾಯೇಲ್ ವಂಶಕ್ಕೆ ಹತ್ತು ಜನ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:3
10 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.


ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು