Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:4
27 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು