Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:1
26 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.


‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”


ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.


ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು