Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:4
18 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.


ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”


“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.


ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.


ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.


ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು