Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೆಹೋವನು ತನ್ನ ನಿರ್ಧಾರವನ್ನು ಬದಲಿಸಿ ಹೀಗೆಂದನು, “ಅದು ನೆರವೇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:3
16 ತಿಳಿವುಗಳ ಹೋಲಿಕೆ  

ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.


‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು