Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:9
16 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.


‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?


ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು