Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:3
21 ತಿಳಿವುಗಳ ಹೋಲಿಕೆ  

ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.


ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.


ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.


ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು