Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:9
18 ತಿಳಿವುಗಳ ಹೋಲಿಕೆ  

ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು