Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:13
15 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.


‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.


ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.


ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು