Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅದ್ಲ್ಯಾ ಎಳಾತ್ ದೆವಾನ್ ಅಮ್ಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಸುಮಾರ್ ಎಳಾರ್ ದುಸ್ರ್ಯಾ-ದುಸ್ರ್ಯಾ ತರಾನ್ ಪ್ರವಾದ್ಯಾಂಚ್ಯಾ ಮುಖಾಂತರ್ ಬೊಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:1
35 ತಿಳಿವುಗಳ ಹೋಲಿಕೆ  

ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.


“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.


ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.


ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.


ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.


ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.


ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು