Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹ್ಯಾಚ್ ಇಚ್ಚ್ಯಾಸಾರ್ಕೆ ಜೆಜು ಕ್ರಿಸ್ತಾಚ್ಯಾ ಆಂಗಾಚ್ಯಾ ಎಕುಚ್‍ದಾ ಕರಲ್ಯಾ ಬಲಿ ವೈನಾ ಅಮಿ ಪವಿತ್ರ್ ಹೊಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:10
25 ತಿಳಿವುಗಳ ಹೋಲಿಕೆ  

ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು