Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಹ್ಯಾ ಯಾಜಕಾನ್ ಸಗ್ಳ್ಯಾ ಪಾಪಾಂಚ್ಯಾ ಪರಿಹಾರ್ ಸಾಟ್ನಿ ಎಗ್ದಾಚ್ ಎಕುಚ್ ಬಲಿ ಭೆಟ್ವುಲ್ಯಾನ್, ಅನಿ ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:12
15 ತಿಳಿವುಗಳ ಹೋಲಿಕೆ  

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.


ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು