Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಂಚ್ಯಾ ಆರಾಧನ್‍ ಕರ್ತಲ್ಯಾ ದೆವಾನ್ ತೆಂಕಾ ಪಾಪಾತ್ನಾ ಪುರಾ ರಿತಿನ್ ಧುವ್ನ್ ಕಾಡಲ್ಲೆ ರ್‍ಹಾಲ್ಯಾರ್, ತೆನಿ ಬಲಿ ದಿತಲೆ ಮನುನ್ ತೆಂಚೊ ಮನ್ ಕಸೊ ಸಾಂಗುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:2
8 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.


ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.


ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು