Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ಅಮಿ ಫಾಟಿ ಸರ್ಕುನ್ ನಾಸ್ ಹೊತಲೆ ನ್ಹಯ್, ಹೆಚ್ಯಾ ಬದ್ಲಾಕ್ ವಿಶ್ವಾಸಾನ್ ರ್‍ಹಾವ್ನ್ ಸುಟ್ಕಾ ಖಮ್ವುನ್ ಘೆತಲ್ಯಾಂಚ್ಯಾ ಮದ್ಲೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:39
28 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.


ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.


ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು