Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:4
19 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.


ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು