Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ತೆನಿ ಸರ್ಗ್ ಮನ್ತಲ್ಯಾ ಬರ್‍ಯಾ ದೆಶ್ಯಾಕ್ ಆಸ್ಯಾ ಕರ್‍ತಲಿ ಲೊಕಾ ತಸೆ ಹೊವ್ನ್, ತೆಂಚೊ ದೆವ್ ವಿಶ್ವಾಸಾನ್ ಅಪ್ನಾಚ್ಯಾ ಲೆಕಾಕ್ ಭೆಟ್ವುನ್ ದಿವ್ಕ್ ಲಾಗಲ್ಲೊ, ತೆಕಾ ಗೊಸ್ಟ್ ದಿವ್ನ್ ಹೊಲ್ಲಿ ಹೊತ್ತ್ಯೆ ಹೊಲ್ಯಾರ್ಬಿ ಅಪ್ನಾಚ್ಯಾ ಎಕ್ಲ್ಯಾಚ್ ಲೆಕಾಕ್ ಬಲಿ ಕರುನ್ ದಿವ್ಕ್ ತೊ ತಯಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:16
26 ತಿಳಿವುಗಳ ಹೋಲಿಕೆ  

ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು