Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಅನಿ ಥೊಡ್ಯಾಕ್ನಿ ಎಡ್ಸಡ್ಲ್ಯಾನಿ ಬಾರ್‍ಕೊಲಾನಿ ಮಾರ್‍ಲ್ಯಾನಿ, ಅನಿ ತರಾಸಾನ್ ಬಂದಿಖಾನ್ಯಾತ್ ರ್‍ಹಾಯ್‍ ಸಾರ್ಕೆ ಕಾಪುನ್ ದೊನ್ ತುಕ್ಡೆ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:36
45 ತಿಳಿವುಗಳ ಹೋಲಿಕೆ  

ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;


ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.


ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.


ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು


ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು