Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಚಲ್ತಲಿ ವಾಟ್ ನಿಟ್ ಕರಾ, ಅಶೆ ತುಮ್ಚಿ ಸೊಟ್ಟಿ ಪಾಯಾ ಮೊಡಿನಸ್ತಾನಾ ರ್‍ಹಾಂವ್ದಿತ್, ಹೆಚ್ಯಾ ಬದ್ಲ್ಯಾಕ್ ತಿ ಗುನ್ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:13
15 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು