Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮಿ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಸಮಾದಾನಾನ್ ಅನಿ ಪವಿತ್ರ್ ಹೊವ್ನ್ ಜಿವನ್ ಕರುಕ್ ಖಟ್ಪಟಾ, ಕೊನ್ ತೆಂಚ್ಯಾ ಜಿವನಾತ್ ಪವಿತ್ರ್ ಹೊವ್ನ್ ರ್‍ಹಾಯ್ನಾ ತೆನಿ ದೆವಾಕ್ ಬಗುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:14
48 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”


ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.


ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.


ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.


ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.


ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು