Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಕೊನ್‍ಬಿ ದೆವಾಚಿ ಕುರ್ಪಾ ಕಳ್ದುನ್ ಘೆಯ್‍ ನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ ತುಮ್ಚ್ಯಾತ್ ಕೊಡು ಝಾಡಾ ವಾಡಿನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ, ತೆಚ್ಯಾ ವೈನಾ ಸಗ್ಳೆ ತಾಂಡೊಚ್ ಹಾಳ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:15
41 ತಿಳಿವುಗಳ ಹೋಲಿಕೆ  

ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.


ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.


ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.


ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು