Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ನ್ಹವ್ಯಾ ಕರಾರಾಚೊ ಮಧ್ಯಸ್ತ್ ಜೆಜುಕ್ಡೆ ಅನಿ ಅಬೆಲಾಚ್ಯಾ ರಗ್ತಾಚ್ಯಾನ್ಕಿ ಜಾಸ್ತಿ ಅರ್ಥಾಚ್ಯಾ ಸಿಪಡಲ್ಲ್ಯಾ ರಗ್ತಾಕ್ಡೆ ತುಮಿ ಯೆಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:24
24 ತಿಳಿವುಗಳ ಹೋಲಿಕೆ  

ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.


ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು