ಇಬ್ರಿಯರಿಗೆ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆ ಹೊಲ್ಯಾರ್ ಜೆಜುಚ್ಯಾ ವೈನಾ ದೆವಾಕ್ ಹೊಗ್ಳಾಪ್ ದಿತಲಿ ಬಲಿ ಅಮಿ ಸದ್ದಿಚ್ ಭೆಟ್ವುವಾ, ಹಿಚ್ ತೆಚೆ ನಾವ್ ಒಪ್ಪುನ್ ಘೆಟಲ್ಲ್ಯಾಂಚ್ಯಾ ಹೊಟ್ಟಾಂಚಿ ಉಪ್ಕಾರ್ ಸ್ತುತಿ. ಅಧ್ಯಾಯವನ್ನು ನೋಡಿ |
ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.