Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮ್ಚ್ಯಾ ದಾರಾಕ್ನಿ ಬಡ್ವುತಲ್ಯಾಕ್ನಿ ಸ್ವಾಗತ್ ಕರುಕ್ ಇಸ್ರುನಕಾಶಿ, ಕಶ್ಯಾಕ್ ಮಟ್ಲ್ಯಾರ್, ಅಶೆ ಸ್ವಾಗತ್ ಕರುನ್ ಲೈ ಲೊಕಾನಿ ಗೊತ್ತ್ ನಸ್ತಾನಾ ದೆವಾಚ್ಯಾ ದುತಾಂಚಿಚ್ ಸೆವಾ ಕರ್‍ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:2
21 ತಿಳಿವುಗಳ ಹೋಲಿಕೆ  

ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.


ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,


ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ,


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು