Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಗ್ಳ್ಯಾ ತುಮ್ಚ್ಯಾ ಫಿಡಾರ್‍ಯಾಕ್ನಿ ಅನಿ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್ ಸಾಂಗ್ತಾ, ಅಮ್ಚಿ ಇಟಲಿ ದೆಶಾಚಿ ಭಾವಾ ಅನಿ ಭೆನಿಯಾ ತುಮ್ಕಾ ನಮಸ್ಕಾರ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:24
14 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು