Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ಮನುನ್ ಖರ್ಯಾ ವಿಶ್ವಾಸಾನ್ ಅಮಿ ಮನುವಾ ಸರ್ವೆಸ್ವರುಚ್ ಮಾಜೊ ಮಜತ್‍ದಾರ್ ಕೊನಾಕ್ಬಿ ಮಿಯಾ ಭಿಂಯ್ ನಾ; ಮಾನ್ಸಾಚ್ಯಾನ್ ಮಾಕಾ ಕಾಯ್ ಕರುಕ್ ಹೊಯ್ಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:6
29 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.


ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.


ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.


ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.


ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.


ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.


ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು