Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:17
37 ತಿಳಿವುಗಳ ಹೋಲಿಕೆ  

ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.


ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.


ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.


ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.


ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,


ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.


ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.


ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.


ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,


ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು