Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸ್ಪಷ್ಟವಾಗಿ ಹೇಳಿದನು. ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು; ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವದನ್ನು ನಾವು ಇನ್ನೂ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಸಗ್ಳ್ಯಾ ರಿತಿಚಿ ಸಾಮಾನಾ ತೆಚ್ಯಾ ಅಧಿಕಾರಾಚ್ಯಾ ಖಾಲ್ತಿ ಯೆಯ್ ಸಾರ್ಕೆ ಕರ್‍ಲೆಯ್ ಮಟ್ಲ್ಯಾರ್, ತೆಚ್ಯಾ ಅಧಿಕಾರಾಕ್ನಾ ಕಾಯ್ಬಿ ಭಾಯ್ರ್ ಹಾನುಕ್ ನಾ ಮನುನ್ ಹೊಲೆ, ಹೊಲ್ಯಾರ್ಬಿ ಸಗ್ಳ್ಯೆಬಿ ತೆಂಚ್ಯಾ ಅದಿಕಾರಾಚ್ಯಾ ಖಾಲ್ತಿ ಹೊತ್ತೆ ಅತ್ತಾ ಅಮ್ಕಾ ದಿಸುನ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:8
19 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.


ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು