Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಜೆಜುಕ್ ಉಲ್ಲ್ಯಾಸ್ಯಾ ಎಳಾಸಾಟಿ ದೆವ್‍ದುತಾಂಚ್ಯಾನ್‍ಬಿ ಖಾಯ್ಲ್ಯಾ ಜಾಗ್ಯಾರ್ ಹಾನಲ್ಲೆ ಅಮಿ ಬಗಟ್ಲಾಂವ್; ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಉದಾರ್ ಇಚ್ಚ್ಯಾ ಪರ್‍ಕಾರ್ ಜೆಜುನ್ ಹರ್ ಎಕ್ ಮಾನ್ಸಾಂಚ್ಯಾಸಾಟ್ನಿ ಮರಾನ್ ಸೊಸ್ತಲೆ ಹೊತ್ತೆ. ತೆನಿ ಮರಾನ್ ಸೊಸ್ಲ್ಯಾನ್ ತಸೆ ಮನುನ್ ತೆನಿ ಮಹಿಮೆಚೆ ಅನಿ ಮಾನಾಚೆ ಮುಕುಟ್ ಖಮ್ವುನ್ ಘೆಟಲ್ಲೆ ಅಮಿ ಬಗುಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:9
39 ತಿಳಿವುಗಳ ಹೋಲಿಕೆ  

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.


ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು