Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ಮಾಜ್ಯಾ ಭಾವಾನು ಅನಿ ಭೆನಿಯಾನು ಹುರ್ಶಾಕಿತ್ ರ್‍ಹಾವಾ, ಝಿತ್ತ್ಯಾ ದೆವಾಕ್ನಾ ಧುರ್ ನ್ಹೆತಲೊ ಖೊಟೊ ಅನಿ ವಿಶ್ವಾಸಾನ್ ನಸಲ್ಲೊ ಮನ್ ತುಮ್ಚ್ಯಾ ಕೊನಾಚ್ಯಾ ಭುತ್ತುರ್ ರಾತಲೊ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:12
37 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.


ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.


ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.


ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು