Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಚಾಳಿಸ್ ವರ್ಸಾ ಪತರ್ ದೆವ್ ಕೊನಾಚ್ಯಾ ವರ್ತಿ ರಾಗಾನ್ ಹೊತ್ತೊ? ಡಂಗ್ಳಿತ್ ಮಡಿ ಪಡಲ್ಲ್ಯಾ ಪಾಪ್ ಕರಲ್ಲ್ಯಾ ತ್ಯಾ ಲೊಕಾಂಚ್ಯಾ ವರ್‍ತಿಚ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:17
11 ತಿಳಿವುಗಳ ಹೋಲಿಕೆ  

ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.


ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು