Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ತೆಂಕಾ ಆರಾಮ್ ಘೆವ್ಕ್ ಮನುನ್ ತಯಾರ್ ಕರುನ್ ಥವಲ್ಲ್ಯಾ ತ್ಯಾ ಗಾಂವಾತ್ ತೆನಿ ಕನ್ನಾಬಿ ಭುತ್ತುರ್ ಗುಸಿನಾತ್.” ಮನುನ್ ದೆವಾನ್ ಆನ್ ಘಾಲುನ್ ಸಾಂಗಟಲ್ಲೆ ಕೊನಾಚ್ಯಾ ವಿಶಯಾತ್ ತೆ? ತೆನಿ ಸಾಂಗಟಲ್ಲೆ ಆಯ್ಕಿನಸ್ತಾನಾ ಚಲ್ತಲ್ಯಾ ಲೊಕಾಂಚ್ಯಾ ವಿಶಯಾತುಚ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:18
16 ತಿಳಿವುಗಳ ಹೋಲಿಕೆ  

ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.


ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.


ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.


ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”


ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು