Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೊಶ್ವಾನ್ ತೆಂಕಾ ಹ್ಯೊ ಆರಾಮ್ ದಿಲ್ಲ್ಯಾನ್ ಹೊಲ್ಯಾರ್, ಅನಿ ಎಗ್ದಾ ಅನಿ ಎಕ್ ದಿಸಾಚ್ಯಾ ವಿಶಯಾತ್ ದೆವ್ ಅಶೆಚ್ ಬೊಲಿನಶಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:8
13 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು