Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗೆಯೇ ಕ್ರಿಸ್ತನು ಸಹ ತನ್ನನ್ನು ಘನಪಡಿಸಿಕೊಂಡು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ; ಆದರೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ಈ ದಿನ ನಾನು ನಿನ್ನ ತಂದೆಯಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚ್ಯಾ ಸಾರ್ಕೆಚ್ ಕ್ರಿಸ್ತಾನ್‍ಬಿ ಶ್ರೆಸ್ಟ್ ಯಾಜಕಾಚೆ ಮೊಟೆಪಾನ್ ಅಪ್ನಿಚ್ ಹೊವ್ನ್ ಘೆವ್ಕ್ ನಾ, ತೆಕಾ ಯಾಜಕ್ ಕರುನ್ ನೆಮಲ್ಲ್ಯಾ ತ್ಯಾ ದೆವಾನ್ ತೆಕಾ, ತಿಯಾ ಮಾಜೊ ಲೆಕ್, ಆಜ್ಚ್ಯಾ ದಿಸಿ ಮಿಯಾ ತುಕಾ ಬಾಬಾ ಹೊಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:5
12 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,


ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು