Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ ಅಪ್ಲ್ಯಾ ವಿಶ್ವಾಸಾತ್ ಪಡುನ್ ಗೆಲ್ಯಾರ್ ತೆಂಕಾ ದೆವಾಕ್ಡೆ ಮನ್ ಪರ್ತುನ್ ಹಾನ್ತಲೆ ಹೊಯ್ನಸಲ್ಲೆ ಕಾಮ್, ಕಶ್ಯಾಕ್ ಮಟ್ಲ್ಯಾರ್, ತೆನಿ ಅನಿ ಪರ್ತುನ್ ದೆವಾಚ್ಯಾ ಲೆಕಾಕ್ ಕುರ್ಸಾರ್ ಮಾರ್‍ತಲೆ ಬಿ ಅನಿ ಬಹಿರಂಗಾತ್ ಹಾನುನ್ ಅವ್ಮಾನ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:6
17 ತಿಳಿವುಗಳ ಹೋಲಿಕೆ  

ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು