Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮುಖ್ಯನಾದ ವ್ಯಕ್ತಿಯು ಅಲ್ಪನಾದವನಿಗೆ ಆಶೀರ್ವಾದ ಮಾಡುತ್ತಾನೆಂಬುದು ಜನರೆಲ್ಲರಿಗೂ ತಿಳಿದಿರುವ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರಮುಖ್ ಮಾನುಸ್ ಕಮ್ಮಿ ಹೊತ್ತ್ಯಾ ಮಾನ್ಸಾಕ್ ಆಶಿರ್ವಾದ್ ಕರ್‍ತಾ ಮನ್ತಲ್ಯಾತ್ ಕಾಯ್ಬಿ ಸಂಶೆವ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:7
16 ತಿಳಿವುಗಳ ಹೋಲಿಕೆ  

ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.


ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.


ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು