Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ಲೊಬಿ ಭಾವಾಕ್ ಹೊಂವ್ದಿ, ದುಸ್ರ್ಯಾಕ್ ಹೊಂವ್ದಿ ಕಾಯ್ ಶಿಕ್ವುತಲೆ ರ್‍ಹಾಯ್ನಾ, ದೆವಾಕ್ ಕಳ್ದುನ್ ಘೆವಾ ಮನ್ತಲೆ ರ್‍ಹಾಯ್ನಾ, ಕಶ್ಯಾಕ್ ಮಟ್ಲ್ಯಾರ್ ಲೈ ಮುಖ್ಯ್ ಹೊತ್ತ್ಯಾಂಚ್ಯಾಕ್ನಾ ಲೈ ಕಮಿಚ್ಯಾ ಮಾನ್ಸಾನ್ ಸಾಂಗಲ್ಲೆ ಸಗ್ಳ್ಯಾನಿಬಿ ಮಾಕಾ ವಳಕ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:11
18 ತಿಳಿವುಗಳ ಹೋಲಿಕೆ  

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


“‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.


ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು