Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹಿ ಯಾಜಕ್ ಲೊಕಾ ಕರ್‍ತಲಿ ಕಾಮಾ ಸರ್ಗಾತ್ಲ್ಯಾ ಕಾಮಾಂಚ್ಯಾ ಅನಿ ಎಕ್ ರುಪ್ ಅನಿ ಸಾವ್ಳಿ ಸಾರ್ಕೆ ಹಾತ್ ಮೊಯ್ಜೆನ್ ದೆವಾಚ್ಯಾ ಖಾಯ್ದ್ಯಾಚ್ಯಾ ಘರ್ ತಯಾರ್ ಕರುಕ್ ಲಾಗಲ್ಲ್ಯಾ ತನ್ನಾ ದೆವಾನ್ ತೆಕಾ ತಿ ಮಿಯಾ ಮಡ್ಡಿರ್ ಡಂಗ್ಳಿತ್ ತುಕಾ ದಾಕ್ವುಲ್ಯಾನ್ ಸಾರ್ಕೆಚ್ ಸಗ್ಳೆ ಲೈ ಹುರ್ಶಾಕಿನ್ ತಯಾರ್ ಕರುಚೆ ಮನುನ್ ಸಾಂಗ್ತಲೆ ಕಾರನಾಕುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:5
18 ತಿಳಿವುಗಳ ಹೋಲಿಕೆ  

ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”


ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.


ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.


ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.


ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.


ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು