Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾನ್ ಬಲ್ವಲ್ಲಿ ಲೊಕಾ ದೆವಾಕ್ನಾ ಗೊಸ್ಟಿಯಾ ಘೆಂವ್ದಿ ಮನುನ್ ಕ್ರಿಸ್ತಾನ್ ನ್ಹವೊ ಕರಾರ್ ಹಾನ್ಲ್ಯಾನ್, ದೆವಾಚಿ ಲೊಕಾ ತೆ ಶಾಸ್ವತ್ ಕರುನ್ ಘೆವ್ಕ್ ಹೊತಾ ಕಶ್ಯಾಕ್ ಮಟ್ಲ್ಯಾರ್, ಪೈಲೆಚ್ಯಾ ಕರಾರಾಚ್ಯಾ ವೆಳಾರ್ ಕರಲ್ಯಾ ಪಾಪಾಂತ್ನಾ ಲೊಕಾಕ್ನಿ ಸುಟ್ಕಾ ಕರುಕ್ ಸಾಟ್ನಿ ಕ್ರಿಸ್ತ್ ಖುರ್ಸಾರ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:15
52 ತಿಳಿವುಗಳ ಹೋಲಿಕೆ  

ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.


ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು