Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅದ್ದಿ ಮೊಯ್ಜೆಚೆ ಖಾಯ್ದ್ಯಾಚೆ ಹುಕುಮ್ ಲೊಕಾಕ್ನಿ ಕಳ್ವುಲ್ಯಾನ್, ತೆಚ್ಯಾ ಮಾನಾ ಪಾಡ್ಕ್ಯಾಂಚೆ ಅನಿ ಪಾಲ್ವ್ಯಾಂಚೆ ರಗಾತ್ ಘೆವ್ನ್ ಪಾನಿಯಾತ್ ಮಿಳ್ವುಲ್ಯಾನ್, ಪಾನಿ, ಅನಿ ರಗಾತ್ ಪವಿತ್ರ್ ಪುಸ್ತಕಾತ್ ಅನಿ ಲೊಕಾಂಚೆರ್ ಹೆ ಸಿಪ್ಡುಕ್ ತಾಂಬ್ಡೊ ಕಾಪುಸ್ ಅನಿ ಹಿಸ್ಸೊಪ್ ಝಾಡಾಚಿ ಟಾಳಿ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:19
26 ತಿಳಿವುಗಳ ಹೋಲಿಕೆ  

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.


ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.


ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.


ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,


ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.


ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.


ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


“‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.


“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,


ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು