Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವುಗಳು ಹೀಗೆ ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ಯಾವಾಗಲೂ ಗುಡಾರದ ಮುಂದಣ ಭಾಗದೊಳಗೆ ಹೋಗಿ ದೇವಾರಾಧನೆಯನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಸಗ್ಳೆ ಬಿಡಾರಾತ್ ತಯಾರ್ ಕರುನ್ ಥವಲ್ಲೆ ರ್‍ಹಾಯ್, ಅನಿ ಯಾಜಕ್ ಅಪ್ನಾಚಿ ಸದ್ದಾಚಿ ಸೆವಾ ಕರುಕ್ ಬಿರಾಡಾತ್ಲ್ಯಾ ಭಾಯ್ಲ್ಯಾ ಖೊಲಿತ್ ಜಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:6
9 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.


ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು