Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರಂದರೆ - ಯಾಜಕರಲ್ಲಿ - ಯೋಚಾದಾಕನ ಮಗ ಯೇಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:18
27 ತಿಳಿವುಗಳ ಹೋಲಿಕೆ  

ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.


ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.


ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,


ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973


ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.


ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು