Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿವಿುತ್ತ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:6
16 ತಿಳಿವುಗಳ ಹೋಲಿಕೆ  

ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.


ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.


ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು